ವಿಧವಾ ಪಿಂಚಣಿ ಯೋಜನೆ ಅರ್ಜಿ 2026 | Widow Pension Scheme In Karnataka | WPS

ವಿಧವಾ ಪಿಂಚಣಿ ಯೋಜನೆ ಅರ್ಜಿ 2026 | Widow Pension Scheme In Karnataka

ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸರ್ಕಾರವು ಬಡ ಕುಟುಂಬದ ವಿಧವೆಯರಿಗೆ ವಿಧವಾ ಪಿಂಚಣಿ ಯೋಜನೆಯನ್ನು ಜಾರಿಗೆತಂದಿದ್ದು, ಅವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. 2026 ನೇ ಸಾಲಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗಿನ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಿ.

Widow Pension Scheme In Karnataka

ಈ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿ ಬೇಕಾದರೆ ನಮ್ಮ ವೆಬ್ ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಿರುವ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಮಾನದಂಡ, ಯೋಜನೆಯ ಪ್ರಯೋಜನ, ಅಗತ್ಯ ದಾಖಲೆಗಳ ಬಗ್ಗೆ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಯೋಜನೆಯ ಅವಲೋಕನ: (Widow Pension Scheme In Karnataka)

ಯೋಜನೆಯ ಹೆಸರು ವಿಧವಾ ಪಿಂಚಣಿ ಯೋಜನೆ
ಅರ್ಹ ಫಲಾನುಭವಿಗಳು ಬಡತನ ರೇಖೆ ಗಿಂತ ಕೆಳಗಿರುವ ಕುಟುಂಬದ ವಿಧವೆಯರು
ಅರ್ಜಿಸಲ್ಲಿಸುವ ರಾಜ್ಯ ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮತ್ತು ಆಫ್ ಲೈನ್
Widow Pension Scheme In Karnataka

ಸಂಕ್ಷಿಪ್ತ ಮಾಹಿತಿ :

ಕರ್ನಾಟಕ ಸರ್ಕಾರವು ಜಾರಿಗೊಳಿಸಿದ್ದ ಹಲವಾರು ಯೋಜನೆಗಳಲ್ಲಿ ವಿಧವಾ ಪಿಂಚಣಿ ಯೋಜನೆಯು ಒಂದಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುರ್ಬಲ ವಿಧವೆಯರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ 1984 ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿಯಲ್ಲಿ ನಿರ್ಗತಿಕ ವಿಧವೆಯರು ಯಾವುದೇ ಹಣವನ್ನು ಪಾವತಿಸದೆ ಸರ್ಕಾರದಿಂದ ನೇರವಾಗಿ ಪಿಂಚಣಿಯನ್ನು ಪಡೆದುಕೊಳ್ಳಬಹುದು.

ಯೋಜನೆಯ ಬಗ್ಗೆ:

ವಿಧವಾ ಪಿಂಚಣಿ ಯೋಜನೆಯನ್ನು 1984 ಏಪ್ರಿಲ್ 1 ರಂದು ಜಾರಿಗೆ ತರಲಾಗಿದ್ದು, ಯೋಜನೆಯು ಪ್ರಾರಂಭಗೊಂಡಾಗ ವಿಧವೆಯರಿಗೆ ಕೇವಲ 40 ರೂ. ಮಾಸಿಕ ಪಿಂಚಣಿಯನ್ನು ನೀಡಲಾಗಿತ್ತು.

ಕಾಲಕಾಲಕ್ಕೆ ಪಿಂಚಣಿ ಮೊತ್ತವನ್ನು ರೂ. 400 ಕ್ಕೆ ನಂತರ ರೂ. 500 ಕ್ಕೆ ಏರಿಕೆ ಮಾಡಲಾಯಿತು. ನಂತರ ಮುಖ್ಯಮಂತ್ರಿಗಳು 2021 ರ ಪರಿಷ್ಕರಣೆಯಲ್ಲಿ ಪಿಂಚಣಿ ಮೊತ್ತವನ್ನು 800 ಕ್ಕೆ ಹೆಚ್ಚಿಸಿದರು.

ನಂತರ 2025 ರ ಅಂತ್ಯದ ವೇಳೆಗೆ ಸರ್ಕಾರವು ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ರೂ 2000 ಮಾಸಿಕ ಪಿಂಚಣಿಯನ್ನು ನೀಡಲಾಗುತ್ತಿದೆ ಜೊತೆಗೆ ಅರ್ಹ ವಿಧವೆಯರಿಗೆ ಮಾಸಿಕ ಪಿಂಚಣಿ ರೂ. 800 ನೀಡಲಾಗುವುದು.

ಯೋಜನೆಯ ಉದ್ದೇಶ:

  • ವಿಧವೆಯರು ತಮ್ಮ ದಿನನಿತ್ಯದ ಅಗತ್ಯಗಳಿಗಾಗಿ ಇತರರಿಗೆ ಅವಲಂಬಿತವಾಗಿರದೆ ಸ್ವಾವಲಂಬಿ ಜೀವನವನ್ನು ನಡೆಸಲು ಈ ಯೋಜನೆಯು ಸಹಕಾರಿಯಾಗಿದೆ.
  • ಪತಿಯನ್ನು ಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ಮಹಿಳೆಯರಿಗೆ ಸರ್ಕಾರದಿಂದ ಆರ್ಥಿಕ ನೆರವನ್ನು ನೀಡುವುದು.
  • ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ನಿರ್ಗತಿಕ ಮಹಿಳೆಯರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದು.

ಯೋಜನೆಯ ಪ್ರಯೋಜನ:

  • ಅರ್ಹ ವಿಧವೆಯರಿಗೆ ಮಾಸಿಕ ರೂ. 800 ಪಿಂಚಣಿಯ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
  • ನಿರ್ಗತಿಕ ವಿಧವೆಯರು ಸಣ್ಣಪುಟ್ಟ ಮನೆ ಖರ್ಚನ್ನು ನಿಭಾಯಿಸಿಕೊಂಡು ಹೋಗಲು ಈ ಯೋಜನೆಯು ಸಹಾಯಕಾರಿಯಾಗಿದೆ.
  • ದುರ್ಬಲ ವಿಧವೆಯರು ಇತರರಿಗೆ ಹೊರೆಯಾಗದೆ ಸ್ವಾವಲಂಬಿ ಜೀವನವನ್ನು ನಡೆಸಲು ಸಹಾಯಕಾರಿಯಾಗಿದೆ.

ಅರ್ಹತಾ ಮಾನದಂಡ: Widow Pension Scheme In Karnataka

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರ ಕನಿಷ್ಠ 18 ವರ್ಷ ಮೇಲ್ಪಟ್ಟಿರುವವರಾಗಿರಬೇಕು.
  • ಇತರೆ ಯಾವುದೇ ಸರ್ಕಾರಿ ಪಿಂಚಣಿಯ ಲಾಭವನ್ನು ಪಡೆಯುತ್ತಿರಬಾರದು.
  • ಅರ್ಜಿದಾರರು ಮರು ಮದುವೆ ಆಗಿರಬಾರದು.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • BPL ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ಪತಿಯ ಮರಣ ಪ್ರಮಾಣಪತ್ರ
  • ಬ್ಯಾಂಕ್ ಖಾತೆಯ ವಿವರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ವಯಸ್ಸಿನ ದೃಢೀಕರಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ: Widow Pension Scheme In Karnataka

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು:

  • ಸೇವಾ ಸಿಂಧೂ ಪೋರ್ಟಲ್ https://sevasindhu.karnataka.gov.in ಗೆ ಭೇಟಿನೀಡಿ
  • ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
  • ನಂತರ ಅಗತ್ಯ ಮಾಹಿತಿಗಳನ್ನು ಭರ್ತಿಮಾಡಿ
  • ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
  • ಅಗತ್ಯವಿದ್ದರೆ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು:

  • ನಿಮ್ಮ ಹತ್ತಿರದ ತಹಶೀಲ್ದಾರ್ ಕಚೇರಿಗೆ ಅಥವಾ ನಾಡಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ

ತೀರ್ಮಾನ:

ಕರ್ನಾಟಕ ಸರ್ಕಾರವು ದುರ್ಬಲ ವಿಧವೆಯರಿಗಾಗಿ ಯೋಜನೆಯನ್ನು ಜಾರಿಗೆ ತಂದಿದ್ದು, BPL ಕುಟುಂಬಕ್ಕೆ ಸೇರಿದ ವಿಧವೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. . ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಅಥವಾ ಹತ್ತಿರದ ತಹಶೀಲ್ದಾರ್ ಕಚೇರಿಗೆ ಅಥವಾ ನಾಡಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಿ.


ಇತರೆ ಪ್ರಮುಖ ಲಿಂಕುಗಳು:

ಪ್ರಮುಖ ಯೋಜನೆಗಳು ಪ್ರಮುಖ ಲಿಂಕುಗಳು
ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಇಲ್ಲಿ ಕ್ಲಿಕ್ ಮಾಡಿ
ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿಇಲ್ಲಿ ಕ್ಲಿಕ್ ಮಾಡಿ
ಉಚಿತ ಲ್ಯಾಪ್ಟಾಪ್ ಯೋಜನೆ 2026ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಿನಿ ಯೋಜನೆ 2026ಇಲ್ಲಿ ಕ್ಲಿಕ್ ಮಾಡಿ
ಭಾಗ್ಯಲಕ್ಷ್ಮಿ ಯೋಜನೆ 2026 ಅರ್ಜಿ ಸಲ್ಲಿಸುವ ವಿಧಾನಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *